ಸಧ್ಯದ ದರದು.

            ಜೀವನದ  ಪ್ರತಿಯೊಂದು ಘಳಿಗೆಯೂ ತನ್ನದೇ ಆದ ಪ್ರಾಮುಖ್ಯತೆಯನ್ನು ಹೊಂದಿರುತ್ತದೆ. ಕಾಲದ ಗಣನೆಯಲ್ಲಿ ವರ್ತಮಾನ ಕಾಲವೆಂಬುದೆ ಇಲ್ಲ. ಭೂತ ಮತ್ತು  ಭವಿಷ್ಯದ  ಅತಿ ತೆಳ್ಳನೆಯ ಕೂದಲು ಗಾತ್ರದ ಎಳೆ ಇದು . ಆದರೆ ನಾವು ಯಾವಾಗಲೂ ಭೂತ ಭವಿಷ್ಯ ಗಳ  ಲೋಕದಲ್ಲೇ  ವಿಹರಿಸುತ್ತ  ಇರುತ್ತೇವೆ.ಅತಿ  ಪ್ರಮುಖವಾದ   ವರ್ತಮಾನ  ವನ್ನು ಯೋಚಿಸಲು ಚಿಂತಿಸಲೂ  ನಮಗ ವೇಳೆ ಇಲ್ಲ. ಈ ವರ್ತಮಾನ ವನ್ನು ವಿಸ್ತಾರ ಗೊಳಿಸುವ ಆಲೋಚನಯೇ ನಮಗಿಲ್ಲ. ಆದರೆ ಈ  ಜೀವನದ ವ್ರಮುಖ ಸಂಗತಿ  ಯಲ್ಲೇ ನಮ್ಮ ಸುಖ ಶಾಂತಿ ಅಡಗಿರುತ್ತದೆ .ಇಂದು ಇಂದಿಗೆ ನಿನ್ನೆ ನಿನ್ನೆಗೆ ಇರಲಿ ನಾಳೆಯು ನಾಳೆಗೆ ಎಂಬ ಸೂತ್ರವನ್ನು  ಶೀಘ್ರ ವಾಗಿ ಅಳವಡಿಸಿಕೊಳ್ಳುವ ಅಗತ್ಯತೆ ಈಗ ನಮ್ಮ ಮುಂದಿದೆ.ನನ್ನ ದೃಷ್ಟಿ ಎಲ್ಲಿಯ ವರೆಗೂ ಹಾಯು ತ್ತದೋ ಅಲ್ಲಿಯ ವರೆಗಿನ ನೋಟ ನನ್ನದು ,ದೂರದ ಮಂಜು ಮುಸುಕಿದ ದಿಗಂತ ವಲ್ಲ.ಸಧ್ಯದ ಕಣ್ಣೆದುರಿಗಿನ ಹಿಡಿದ ಕೆಲಸ ಮುಗಿಸುವ ಹೊರೆ ಇದ್ದಾಗ ಅದರ ಮುಂದಿನ ಆಲೋಚನೆ ನಮಗೇಕೆ ,ಅಲ್ಲವೇ? 

                                                                                                                                            ಎಸ್ .ಗಿರೀಶ ಪುತ್ರಾಯ.

Comments

Popular posts from this blog

ಅಮ್ಮ

ಸಂಕ್ರಮಣ

ಹಬ್ಬ ಹಬ್ಬ !!